- Advertisement -
- Advertisement -
ಉಜಿರೆ: ರಾಜ್ಯಸಭೆಗೆ ನಾಮ ನಿರ್ದೇಶನಕಗೊಂಡ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಬೆಂಗಳೂರಿನಲ್ಲಿದ್ದರು. ಇಂದು ಸಂಸದರಾದ ಬಳಿಕ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ವೀರೇಂದ್ರ ಹೆಗ್ಗಡೆಯವರು ಆಗಮಿಸಿದ್ದು, ಈ ವೇಳೆ ಅವರಿಗೆ ಉಜಿರೆಯಲ್ಲಿ ಭರ್ಜರಿ ಸ್ವಾಗತ ದೊರೆಯಿತು.
ಚೆಂಡೆ ಬಾರಿಸಿ ಪಟಾಕಿ ಸಿಡಿಸಿ ಹೂ ಹಾರ ಹಾಕಿ ಖಾವಂದರನ್ನು ಸ್ವಾಗತಿಸಲಾಯಿತು. ಈ ವೇಳೆ ಶಾಸಕ ಹರೀಶ್ ಪೂಂಜ , ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್, ಹರಿಕೃಷ್ಣ ಬಂಟ್ವಾಳ , ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ , ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ , ಧರ್ಮಸ್ಥಳ ಯೋಜನೆಯ ಅಧಿಕಾರಿಗಳು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.
- Advertisement -