Thursday, July 4, 2024
Homeಕರಾವಳಿಮಂಗಳೂರು;  ಆಪ್ತನ ನೋವಿಗೆ ಮಿಡಿದ ಯು ಟಿ ಖಾದರ್; ಮಿತ್ರನ ಸಹೋದರನ ಅಂತಿಮಯಾತ್ರೆಗೆ ಹೆಗಲು ಕೊಟ್ಟ...

ಮಂಗಳೂರು;  ಆಪ್ತನ ನೋವಿಗೆ ಮಿಡಿದ ಯು ಟಿ ಖಾದರ್; ಮಿತ್ರನ ಸಹೋದರನ ಅಂತಿಮಯಾತ್ರೆಗೆ ಹೆಗಲು ಕೊಟ್ಟ ಸ್ಪೀಕರ್

spot_img
- Advertisement -
- Advertisement -

ಮಂಗಳೂರು;  ಉಳ್ಳಾಲದ ಶಾಸಕ, ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ತಮ್ಮ ಆಪ್ತನ ನೋವಿಗೆ ಮಿಡಿದಿದ್ದಾರೆ. ಗೆಳೆಯನ ಸಹೋದರನ ಅಂತಿಮಯಾತ್ರೆಗೆ ಹೆಗಲು ಕೊಟ್ಟಿದ್ದಾರೆ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್.ಆ ಮೂಲಕ ಮಾನವೀತೆಯ ಜೊತೆಗೆ ನೋವಿಗೆ ಜಾತಿ ಧರ್ಮದ ಹಂಗಿಲ್ಲ ಎಂದು ಸಾರಿ ಹೇಳಿದ್ದಾರೆ.
ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ (55) ಅಕಾಲಿಕವಾಗಿ ಭಾನುವಾರ ಮರಣಹೊಂದಿದ್ದರು. ವಿಚಾರ ಗೊತ್ತಾಗುತ್ತಿದ್ದಂತೆ ಯು.ಟಿ ಖಾದರ್ ಅವರು ಪೂರ್ವನಿಗದಿ ಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ತಕ್ಷಣವೇ ಮಿತ್ತಕೋಡಿಯ ಕಾಜವ ಅವರ‌ ಮನೆಗೆ ತೆರಳಿದ್ದಾರೆ. ಸಂಬಂಧಿಕರಿಗೆ ಧೈರ್ಯ ತುಂಬಿದ ಖಾದರ್ ನಂತರ ನಡೆದ ಅಂತಿಮಯಾತ್ರೆಯ ಮೇಳೆ ಹೆಗಲುಕೊಟ್ಟಿದ್ದಾರೆ.

ನರಿಂಗಾನ ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಸಹೋದರರಾಗಿದ್ದ ಶರತ್ ಕಾಜಾವ, ಪ್ರಗತಿಪರ ಕೃಷಿಕ ವೆಂಕಪ್ಪ ಕಾಜವರ ಪುತ್ರ. ಕಂಬಳ ಸಮಿತಿಯ ಸದಸ್ಯರೂ ಆಗಿದ್ದ ಅವರು ಮಿತ್ತಕೋಡಿ ಕಂಬಳದ ಯಶಸ್ಸಿಗಾಗಿ ಹಲವು ವಾರಗಳ ಕಾಲ ದುಡಿದಿದ್ದರು. ವಿಧಾನಸಭಾಧ್ಯಕ್ಷರಾದ ಖಾದರ್ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಆಪ್ತನ ಸಹೋದರ ಅಂತಿಮ ಕಾರ್ಯದಲ್ಲಿ ಭಾಗವಹಿಸಿದ್ದಾರೆ.ಆ ಮೂಲಕ ಸ್ನೇಹ ನಿಜವಾದ ಅರ್ಥ ಏನು ಎಂಬುವುದನ್ನು ಸಾರಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!