Saturday, May 4, 2024
Homeತಾಜಾ ಸುದ್ದಿಆರತಕ್ಷತೆ ವೇಳೆ ಕುಸಿದು ಬಿದ್ದು ವರ ಸಾವು

ಆರತಕ್ಷತೆ ವೇಳೆ ಕುಸಿದು ಬಿದ್ದು ವರ ಸಾವು

spot_img
- Advertisement -
- Advertisement -

ವಿಜಯನಗರ:ಆರತಕ್ಷತೆ ವೇಳೆ ಕುಸಿದು ಬಿದ್ದು ವರ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೊನ್ನೂರ ಸ್ವಾಮಿ(26) ಮೃತ ಯುವಕ. ನಿನ್ನೆ ಸಂಜೆ ಹೊನ್ನೂರ ಸ್ವಾಮಿ ಅವರ ಮದುವೆ ಆರತಕ್ಷತೆ ನಡೆಯುತ್ತಿತ್ತು. ಈ ವೇಳೆ ಎದೆ ನೋವಿನಿಂದ ಕುಸಿದು ಬಿದ್ದು ಅಸ್ವಸ್ಥಗೊಂಡ ಹೊನ್ನೂರ ಸ್ವಾಮಿ ಅವರನ್ನ ಕೂಡಲೇ ಸಮೀಪದ ಖಾಸಗಿ ಕ್ಲಿನಿಕ್​ಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮದುಮಗ ಕೊನೆಯುಸಿರೆಳೆದಿದ್ದಾನೆ. ಹೃದಯಾಘಾತದಿಂದ ಯುವ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ವರನ ಮನೆಯಲ್ಲಿ ಕುಟುಂಬಸ್ಥರ ರೋಧನ ಮುಗಿಲು‌ ಮುಟ್ಟಿದ್ದು , ಮನೆಯಲ್ಲಿ ಸೂತಕದ ಛಾಯೆ ಮೂಡಿದೆ.

- Advertisement -
spot_img

Latest News

error: Content is protected !!