- Advertisement -
- Advertisement -
ಉಡುಪಿ: ಚತುಷ್ಪಥಗೊಳ್ಳಲಿರುವ ರಾಷ್ಟ್ರೀಯ ಹೆದ್ದಾರಿ 169ಎ ಹೆಬ್ರಿ-ಪರ್ಕಳ-ಕರಾವಳಿ ಬೈಪಾಸ್-ಮಲ್ಪೆ ರಸ್ತೆಯ ಗುದ್ದಲಿ ಪೂಜೆ ಇಂದು ನಡೆಯಿತು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಂದು ಪೆರ್ಡೂರಿನಲ್ಲಿ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್, ಉಡುಪಿ ಶಾಸಕ ರಘುಪತಿ ಭಟ್, ಅಧಿಕಾರಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. 355.72 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಚತುಷ್ಪಥಗೊಳ್ಳಲಿದೆ.
- Advertisement -