- Advertisement -
- Advertisement -
ಬೆಂಗಳೂರು : ತುಳು ಭಾಷೆ ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಶೀಘ್ರವೇ ಅತಿಥಿ ಶಿಕ್ಷಕರ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದಿಂದ ಜಾರಿಯಾಗಲಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸಹ ನ್ಯಾಯ ಸಿಗಲಿದೆ. ಮುಂದಿನ 15 ದಿನಗಳ ಒಳಗೆ ಈ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ ನಂತರ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.
- Advertisement -