Saturday, May 18, 2024
Homeಕರಾವಳಿಉಡುಪಿಉಡುಪಿ: ನೌಕರಿ ಖಾಯಂ ಮಾಡಿಲ್ಲವೆಂದು ಅತಿಥಿ ಉಪನ್ಯಾಸಕ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ !

ಉಡುಪಿ: ನೌಕರಿ ಖಾಯಂ ಮಾಡಿಲ್ಲವೆಂದು ಅತಿಥಿ ಉಪನ್ಯಾಸಕ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ !

spot_img
- Advertisement -
- Advertisement -

ಉಡುಪಿ: ಉದ್ಯೋಗ ಖಾತ್ರಿ, ಉದ್ಯೋಗ ಭದ್ರತೆ, ಗೌರವಧನ ಹೆಚ್ಚಳ ಮತ್ತಿತರ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ಹೊತ್ತಿನಲ್ಲಿ ಅತಿಥಿ ಉಪನ್ಯಾಸಕರೊಬ್ಬರು ತಮ್ಮ ಜೀವನವನ್ನೇ ಅಂತ್ಯಗೊಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಶ್ರೀಹರ್ಷ ಶಾನಭೋಗು (38) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಂಪ್ಯೂಟರ್ ವಿಭಾಗದ ಅತಿಥಿ ಉಪನ್ಯಾಸಕರಾಗಿದ್ದರು. ಅವರು ಇಲ್ಲಿನ ಎಂಜಿಎಂ ಕಾಲೇಜಿನ ಸಿಬ್ಬಂದಿ ವಸತಿಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತ್ನಿ ಶಿಲ್ಪಾ ಶಾನಭೋಗ್ ಅವರು ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಕಳೆದ 13 ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಹರ್ಷ, ನೌಕರಿ ಖಾಯಂ ಮಾಡದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿದ್ದರು. ಅವರ ಮಕ್ಕಳ ಭವಿಷ್ಯದ ಚಿಂತೆ ಅವರನ್ನು ಆವರಿಸಿತ್ತು. ಅವರು ಆಗಾಗ್ಗೆ ಈ ಭಾವನೆಗಳನ್ನು ತಮ್ಮ ಆತ್ಮೀಯರೊಂದಿಗೆ ಹೇಳಿಕೊಂಡಿದ್ದಾರೆ. ಇತ್ತೀಚಿನ ತಿಂಗಳುಗಳಲ್ಲಿ ಮಾನಸಿಕವಾಗಿ ದುರ್ಬಲರಾಗಿದ್ದ ಅವರು ಈ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!