- Advertisement -
- Advertisement -
ಪುತ್ತೂರು;: ಅತಿಥಿ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎನ್ನಲಾಗಿದೆ.
ಪುತ್ತೂರಿನನರಿಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಮಧ್ಯಾಹ್ನ ಊಟ ಮಾಡಿದ ಮೇಲೆ ನೀರು ಕುಡಿಯಲು ಹೋಗಿದ್ದಾನೆ.. ಈ ವೇಳೆ ವೀಣಾ ಎಂಬ ಅತಿಥಿ ಶಿಕ್ಷಕಿ ಪ್ರಶ್ನಿಸಿದ್ದಾರೆ. ನನಗೆ ಮತ್ತು ಇನ್ನೊಬ್ಬ ವಿದ್ಯಾರ್ಥಿಗೆ ಕಬ್ಬಿಣದ ಸ್ಕೇಲ್ನಿಂದ ಹೊಡೆದಿದ್ದು, ಬಲ ಕೈಯ ಬೆರಳ ತುದಿಗೆ ತಾಗಿ ಗಾಯವಾಗಿದೆ ಎಂದು ವಿದ್ಯಾರ್ಥಿ ಆರೋಪಿಸಿದ್ದಾನೆ. ಬಳಿಕ ಬಾಲಕ ಆಸ್ಪತ್ರೆಗೆ ದಾಖಲಾಗಿದ್ದಾನೆ ಎನ್ನಲಾಗಿದೆ.
- Advertisement -