- Advertisement -
- Advertisement -
ಮಂಗಳೂರು: ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ. ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ.
- ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಮಾಡಲು ಅವಕಾಶವಿದೆ.
- ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಬೇಕು.
- ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ.
- ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ.
- ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ.
- ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು.
- ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು.
- ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು.
- 2 ಡೋಸ್ ಪಡೆದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು.
- ಅಪಾರ್ಟ್ ಮೆಂಟ್ ಅಸೋಷಿಯೇಶನ್ ಗಳಲ್ಲಿ ಕೋವಿಡ್ ನಿಯಮದೊಂದಿಗೆ ಆಚರಣೆಗೆ ಅವಕಾಶ
ಗುಂಪು ನೃತ್ಯಕ್ಕಾಗಿ ಡಿಜೆ, ಡ್ಯಾನ್ಸ್ ಫ್ಲೋರ್ ನಂತರ ವಿಶೇಷ ಕಾರ್ಯಕ್ರಮ ನಡೆಸುವಂತಿಲ್ಲ. - ಕಡ್ಡಾಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಸುವುದು ಕಡ್ಡಾಯವಾಗಿರುತ್ತದೆ.
- ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
- Advertisement -