Friday, May 17, 2024
Homeಕರಾವಳಿಉಡುಪಿಉಡುಪಿ: ಯಶ್ ಪಾಲ್ ಸುವರ್ಣಗೆ ನಿರಂತರ ಕೊಲೆ ಬೆದರಿಕೆ :  ಗನ್ ಮ್ಯಾನ್ ನೀಡಿದ ಪೊಲೀಸ್...

ಉಡುಪಿ: ಯಶ್ ಪಾಲ್ ಸುವರ್ಣಗೆ ನಿರಂತರ ಕೊಲೆ ಬೆದರಿಕೆ :  ಗನ್ ಮ್ಯಾನ್ ನೀಡಿದ ಪೊಲೀಸ್ ಇಲಾಖೆ

spot_img
- Advertisement -
- Advertisement -

ಉಡುಪಿ:  ಇಲ್ಲಿನ ಸರಕಾರಿ ಮಹಿಳಾ ಪಿಯು ಕಾಲೇಜು ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಅವರಿಗೆ ನಿರಂತರ ಕೊಲೆ ಬೆದರಿಕೆ ಕರೆಗಳು ಬರುತ್ತಿರುವುದರಿಂದ ಗನ್ ಮ್ಯಾನ್ ಪಡೆದುಕೊಳ್ಳುವಂತೆ ಉಡುಪಿ ಎಸ್ ಪಿ ವಿಷ್ಣುವರ್ಧನ್ ಸಲಹೆ ನೀಡಿದ್ದಾರೆ.

ಕಾನೂನನ್ನ ಗೌರವಿಸಬೇಕು ಗನ್ ಮ್ಯಾನ್ ಪಡೆದುಕೊಳ್ಳಿ ಎಂದು ಎಸ್ಪಿ ಸಲಹೆ ನೀಡಿದ್ದಾರೆ. ಇನ್ನು ಬಗ್ಗೆ ಪ್ರತಿಕ್ರಿಯಿಸಿರುವ ಯಶ್ ಪಾಲ್ ಸುವರ್ಣ ಪೊಲೀಸ್ ಇಲಾಖೆ ಇಂದು ಗನ್ ಮ್ಯಾನ್ ಕಳುಹಿಸಿಕೊಟ್ಟಿದೆ. ನಾನು ಗನ್ ಮ್ಯಾನ್ ಸಂಸ್ಕೃತಿಯಲ್ಲಿ ಬೆಳೆದವ ಅಲ್ಲ. ಉಡುಪಿಯಲ್ಲಿ ಓಡಾಡುವಾಗ ಗನ್ ಮ್ಯಾನ್ ಬೇಡ ಎಂದಿದ್ದೇನೆ.ಈ ಬಗ್ಗೆ ಪಕ್ಷದ ಹಿರಿಯರ ಅಭಿಪ್ರಾಯ ಪಡೆಯುತ್ತೇನೆ ಎಂದಿದ್ದಾರೆ.

ಪೊಲೀಸ್ ಇಲಾಖೆ ಗನ್ ಮ್ಯಾನ್ ಪಡೆಯಲೇಬೇಕು ಎಂದು ಹೇಳಿದೆ. ಪೊಲೀಸ್ ಇಲಾಖೆ ತನ್ನ ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸಬೇಕಾಗಿದೆ. ನಮಗೆಲ್ಲಾ ಭದ್ರತೆ ನೀಡಿದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!