- Advertisement -
- Advertisement -
ಬೆಂಗಳೂರು: ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಕುಂದಾಪುರ ಮೂಲದ ಗುರುರಾಜ ಪೂಜಾರಿ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದಾರೆ.
ಪುರುಷರ 61 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಗುರುರಾಜ ಪೂಜಾರಿ ಕಂಚು ಗೆದ್ದಿದ್ದಾರೆ.
ಗುರುರಾಜ ಪೂಜಾರಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣ ಗೌಡ ಅವರು ಅಭಿನಂದನೆ ಸಲ್ಲಿಸಿದ್ದು, 8 ಲಕ್ಷ ರೂಪಾಯಿ ನಗದು ಪುರಸ್ಕಾರ ಘೋಷಿಸಿದ್ದಾರೆ.
ಇದೇ ವೇಳೆ ಪುರುಷರ 55 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆದ್ದಿರುವ ಸಂಕೇತ್ ಸರ್ಗರ್ ಅವರಿಗೆ ಸಚಿವ ಡಾ. ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
- Advertisement -