- Advertisement -
- Advertisement -
ಸುಬ್ರಹ್ಮಣ್ಯ: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ನಾಯಕ ಹೆಚ್.ಡಿ. ದೇವೇಗೌಡರು ಇಂದು ಪತ್ನಿ ಶ್ರೀಮತಿ ಚೆನ್ನಮ್ಮ ಅವರೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಸಂಪುಟ ನರಸಿಂಹ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಾಕೆ ಮಾಧವ ಗೌಡ, ಮಾಜಿ ಅಧ್ಯಕ್ಷ ಎಂ.ಬಿ ಸದಾಶಿವ, ಜೆಡಿಎಸ್ ನಾಯಕ ರಾದ ಮೀರಾ ಸಾಹೇಬ್ ಕಡಬ, ಸಿ.ಪಿ ಸೈಮನ್, ತಿಲಕ್ ಅಯ್ಯಟ್ಟಿ, ಸೋಮಸುಂದರ ಕೂಜು ಗೋಡು, ಪ್ರವೀಣ್ ಮುಂಡೋಡಿ, ಜ್ಯೋತಿ ಪ್ರೇಮಾನಂದ ಮೆಟ್ಟಿನಡ್ಕ, ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಹರೀಶ್ ಇಂಜಾಡಿ ಮತ್ತಿತರರು ಉಪಸ್ಥಿತರಿದ್ದರು.
- Advertisement -