- Advertisement -
- Advertisement -
ಬೆಂಗಳೂರು : ಇಂದಿನಿಂದ ರಾಜ್ಯದಾದ್ಯಂತ ಹಿಂದೂ ಪರ ಸಂಘಟನೆಗಳು ಹಲಾಲ್ ಅಭಿಯಾನಕ್ಕೆ ಕರೆ ಕೊಟ್ಟಿವೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಹಿಂದೂ ಸಂಘಟನೆಗಳು ಕರೆ ನೀಡಿವೆ.
ಬೆಂಗಳೂರಿನಲ್ಲಿ ಮಹಾ ಸಭೆ ನಡೆಸಿರುವ ಹಿಂದೂ ಸಂಘಟನೆಗಳು ಇಂದಿನಿಂದ ಪ್ರತಿ ಜಿಲ್ಲೆಗಳಲ್ಲೂ ಅಭಿಯಾನ ನಡೆಸಲು ಮುಂದಾಗಿವೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ.
ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಖರೀದಿಸದಂತೆ, ಕರಪತ್ರಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತೇವೆ. ನಮ್ಮ ಅಭಿಯಾನ ರಾಜ್ಯಾದ್ಯಾಂತ ನಡೆಯಲಿದೆ ಎಂದು ಹಿಂದೂ ಜನ ಜಾಗೃತಿ ವೇದಿಕೆಯ ಮೋಹನ್ ಗೌಡ ಹೇಳಿದ್ದಾರೆ.
- Advertisement -