ಅಯೋಧ್ಯೆಯಲ್ಲಿ ರಾಮಮಂದಿರ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಪೇಜಾವರ ವಿಶ್ವೇಶತೀರ್ಥ ಶ್ರೀಪಾದರು ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ. ಪೇಜಾವರ ವಿಶ್ವೇಶತೀರ್ಥ ಶ್ರೀಪಾದರು ಹಾಗೂ ಶ್ರೀಕೃಷ್ಣನ ಇನ್ನೊಂದು ಅವತಾರ ಹಿಂದೂಗಳ ಅರಾಧ್ಯ ದೈವ ಬಿಳಿಗಿರಿರಂಗನ ಬಗ್ಗೆ ತೀರಾ ಹಗುರವಾಗಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಹೇಳಿಕೆಯನ್ನು ಗೋವಿಗಾಗಿ ಮೇವು ಸಂಘಟನೆಯವರು ಖಂಡಿಸಿದ್ದಾರೆ.
ಪೇಜಾವರ ಶ್ರೀಪಾದರು ಜೀವನಪೂರ್ತಿ ಪರಿಶುದ್ಧ ಸನ್ಯಾಸತ್ವ ಸ್ವೀಕರಿಸಿ ಅಸ್ಪೃಶ್ಯತೆ ವಿರುದ್ಧ ಕ್ರಾಂತಿಕಾರಿ ಹೆಜ್ಜೆ ಇಟ್ಟವರು. ಎಲ್ಲರ ಏಳಿಗೆಗಾಗಿ ಶ್ರಮಿಸಿದವರು. ಹಂಸಲೇಖ ಅವರ ಅವಿವೇಕಿತನದ ಹೇಳಿಕೆ ಸಮಸ್ಥ ಹಿಂದೂ ಧರ್ಮಕ್ಕೆ ಮಾಡಿದ ಅವಮಾನ.
ಈ ಕೂಡಲೇ ಅವರು ಉಡುಪಿ ಶ್ರೀಕ್ರಷ್ಣನ ಸನ್ನಿಧಾನ ಇಲ್ಲವೇ ಬಿಳಿಗಿರಿರಂಗನ ಬೆಟ್ಟಕ್ಕೆ ಬಂದು ಸಾರ್ವಜನಿಕ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಗೋವಿಗಾಗಿ ಮೇವು ಸ್ಥಾಪಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ತಿಳಿಸಿದ್ದಾರೆ.