- Advertisement -
- Advertisement -
ಪುತ್ತೂರು ; ಅಪರಿಚಿತ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕನನ್ನು ಕಾಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಪುತ್ತೂರು ತಾಲೂಕಿನ ಕಾವು ಸೇತುವೆ ಬಳಿ ನಡೆದಿದೆ.
ತನ್ನ ಅಜ್ಜಿಯ ಜೊತೆ ಸೊಸೈಟಿಗೆ ಬಂದಿದ್ದ ಬಾಲಕನನ್ನು ಬೈಕ್ ನಲ್ಲಿ ಬಂದ ಅಪರಿಚಿತನೊಬ್ಬ ಅಜ್ಜಿ ಮನೆಗೆ ಬಿಡುತ್ತೇನೆಂದು ಹೇಳಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಬಾಲಕ ಬೈಕ್ ಹತ್ತುತ್ತಿದ್ದಂತೆ ಈಶ್ವರಮಂಗಲ ಕಡೆ ಹೋಗುವ ರಸ್ತೆಯಲ್ಲಿ ಕಾಡಿನತ್ತ ಕರೆದುಕೊಂಡು ಹೋಗಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಈ ಬಗ್ಗೆ ಸಂತ್ರಸ್ತ ಬಾಲಕನ ತಂದೆ ದೂರು ದಾಖಲಿಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
- Advertisement -