- Advertisement -
- Advertisement -
ಮಂಗಳೂರು: ಉಳ್ಳಾಲದ ನೂರಾನಿ ಯತಿಂಖಾನ ಮಕ್ಕಳ ಕೇಂದ್ರದಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ವಾರ್ಡನ್ ಅಯೂಬ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಿರುಕುಳಕ್ಕೆ ಒಳಗಾದ ಬಾಲಕನನ್ನು ರಕ್ಷಣೆ ಮಾಡಲಾಗಿದೆ. ಮಕ್ಕಳ ಕೇಂದ್ರದ ವಾರ್ಡನ್ ಅಯೂಬ್ (52) ಇದೇ ರೀತಿ ಹಲವರಿಗೆ ಕಿರುಕುಳ ನೀಡಿರುವ ಮಾಹಿತಿ ಇದ್ದು, ತನಿಖೆ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಹೇಳಿದ್ದಾರೆ. ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
.
- Advertisement -