Friday, June 27, 2025
Homeಕರಾವಳಿಬೆಳ್ತಂಗಡಿ : ಶಾಸಕ ಹರೀಶ್ ಪೂಂಜರಿಂದ ಮಾರಿಗುಡಿಯಲ್ಲಿ ಪ್ರಾರ್ಥನೆ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜರಿಂದ ಮಾರಿಗುಡಿಯಲ್ಲಿ ಪ್ರಾರ್ಥನೆ

spot_img
- Advertisement -
- Advertisement -

ಬೆಳ್ತಂಗಡಿ: ಒಂದು ರೂಪಾಯಿ ಮುಟ್ಟಿಲ್ಲ ಭ್ರಷ್ಟಾಚಾರ ಮಾಡಿಲ್ಲ ಒಂದು ವೇಳೆ ತಪ್ಪು ಮಾಡಿದ್ದರೆ ತಕ್ಕ ಶಿಕ್ಷೆಯನ್ನು ಮಾರಿಗುಡಿಯ ಮಹಾದೇವಿ ನೀಡಲಿ, ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಾರ್ಥನೆ ಮಾಡಿದ್ದಾರೆ.

ಬೆಳ್ತಂಗಡಿಯ ವಿವಿಧ ರೀತಿಯ ಭ್ರಷ್ಟಾಚಾರಗಳನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾಡಿದ್ದಾರೆ. ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕಳೆದ ಕೆಲವು ದಿನಗಳ ಹಿಂದೆ ಪತ್ರಿಕಾಗೋಷ್ಠಿಯ ಮೂಲಕ ಆರೋಪಿಸಿದ್ದರು.

ಈ ಬಗ್ಗೆ ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡಿದ್ದರಲ್ಲದೇ ಯಾವುದೇ ಭ್ರಷ್ಟಾಚಾರ ಮಾಡಿಲ್ಲ ಎಂದು ಮಾರಿಗುಡಿಯಲ್ಲಿ ಇಂದು  ಪ್ರಮಾಣ ಮಾಡುವುದಾಗಿ ತಿಳಿಸಿದ್ದರು. ಇವತ್ತು ಬೆಳಿಗ್ಗೆ ಮಾರಿಗುಡಿಯಲ್ಲಿ ಭ್ರಷ್ಟಾಚಾರ ನಡೆಸಿಲ್ಲ ಡಿಪಿ ಜೈನ್ ಕಂಪನಿಯಿಂದ 3 ಕೋಟಿ ಕಿಕ್ ಬ್ಯಾಕ್ ಪಡೆದಿಲ್ಲ, ಒಂದು ರೂಪಾಯಿ ಹಣ ಯಾರಿಂದಲೂ ಪಡೆದಿಲ್ಲ ,ಯಾವುದೇ ಭ್ರಷ್ಟಾಚಾರ ಮಾಡಿಲ್ಲ ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿರುವ ರಕ್ಷಿತ್ ಶಿವರಾಂ ಸೇರಿದಂತೆ ಎಲ್ಲರಿಗೂ ತಕ್ಕ ಶಿಕ್ಷೆ ಬೆಳ್ತಂಗಡಿಯ ಮಾರಿಗುಡಿಯ ಮಹಾದೇವಿ ನೀಡಲಿ. ಒಂದು ವೇಳೆ ಅವರು ಆರೋಪಿಸಿದಂತೆ ನಾನು ತಪ್ಪು ಮಾಡಿದ್ದರೆ ನನ್ನನ್ನೂ ಶಿಕ್ಷಿಸಲಿ ಎಂದು ಪ್ರಾರ್ಥಿಸಿದರು.

ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ,  ಜಯಾನಂದ ಗೌಡ ,ಪ್ರಶಾಂತ್ ಪಾರೆಂಕಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!