Friday, June 27, 2025
Homeಕರಾವಳಿಬೆಳ್ತಂಗಡಿ : ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ತನ್ನ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ...

ಬೆಳ್ತಂಗಡಿ : ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ತನ್ನ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ; ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಹೇಳಿಕೆ

spot_img
- Advertisement -
- Advertisement -

ಬೆಳ್ತಂಗಡಿ : ಪ್ರವಾಸಿ ಮಂದಿರ ನಿರ್ಮಾಣದಲ್ಲಿ ರೆಖ್ಯ ದೇವಸ್ಥಾನದ ತಡೆಗೋಡೆ ನಿರ್ಮಾಣ ರಾಷ್ಟ್ರೀಯ  ಹೆದ್ದಾರಿ ಅಭಿವೃದ್ಧಿ ಕಾಮಗಾರಿಯಲ್ಲಿ ಯಾವುದೇ ಹಣವನ್ನು ಪಡೆದಿಲ್ಲ ಹಾಗೂ ಬಿಮಲ್ ಸಂಸ್ಥೆಯಲ್ಲಿ ತನ್ನ ಪಾತ್ರ ಇಲ್ಲ ಎಂಬ ವಿಚಾರಗಳ ಬಗ್ಗೆ ನಾಳೆ ಬೆಳಿಗ್ಗೆ 9 ಗಂಟೆಗೆ ಬೆಳ್ತಂಗಡಿಯ ಮಾರಿಗುಡಿಯಲ್ಲಿ ಪ್ರಮಾಣ ನಡೆಸುವುದಾಗಿ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಆ.13 ರಂದು ಉಜಿರೆ ಓಷನ್‌ ಪಾರ್ಲ್ ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ತನ್ನ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ತಾಲೂಕಿನ ಅಭಿವೃದ್ಧಿಯ ನಿಟ್ಟಿನಲ್ಲಿ ಮಾಡಲಾದ ಕೆಲಸಗಳ ಕುರಿತು ಅವರು ಮಾಡಿರುವುದು ಹುರುಳಿಲ್ಲದ ಆಪಾದನೆಗಳು, ಬೆಳ್ತಂಗಡಿ ಬಸ್ ನಿಲ್ದಾಣ ಕಾಮಗಾರಿಗೆ ಬಿಜೆಪಿ ಸರಕಾರ ಇರುವಾಗಲೇ ಅನುದಾನ ಬಿಡುಗಡೆಗೊಳಿಸುವ ಕುರಿತು ತೀರ್ಮಾನವಾಗಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ಮೊದಲು ತಮ್ಮ ಬಗ್ಗೆ ತಿಳಿದುಕೊಳ್ಳಬೇಕು ಎಂದರು.

ನನಗೆ ಗನ್ ಮ್ಯಾನ್ ಬೇಕೆಂದು ನಾನು ಕೇಳಿಲ್ಲ.ಗುಪ್ತಚರ ಇಲಾಖೆಯ ವರದಿ ಆಧರಿಸಿ ನೀಡಲಾಗಿದೆ. ಕಲ್ಲು ಕೋರೆ ಪ್ರಕರಣದ ಮುಂದುವರಿದ ಭಾಗದಲ್ಲಿ ನನ್ನ ಬಂಧನವಾಗಿಲ್ಲ ಎಂಬ ವಿಚಾರದ ಕುರಿತು ದಾಖಲೆಗಳನ್ನು ನೀಡಿದ ಅವರು 2019ರ ಪ್ರವಾಹದ ವೇಳೆ ಸಮರೋಪಾದಿಯಲ್ಲಿ ಮಾಡಿದ ಕೆಲಸಗಳನ್ನು ನೆನಪಿಸಿದರು.

ನನ್ನ ಮತ್ತು ನನ್ನ ಕುಟುಂಬದವರ ಇಡಿ,ಐಟಿ, ಲೋಕಾಯುಕ್ತ ತನಿಖೆಯಾಗಲಿ ಅದಕ್ಕೆ ಸಿದ್ಧ ಹಾಗೆಯೇ ರಕ್ಷಿತ್  ಶಿವರಾಮ್ ಹಾಗು ಕುಟುಂಬದವರ ಮೇಲು ಈ ತನಿಖೆಗಳು ಆಗಬೇಕು ಚುನಾವಣೆ ಗೋಸ್ಕರ ಬೆಳ್ತಂಗಡಿಯಲ್ಲಿ ಆರಂಭವಾದ ಬೆಸ್ಟ್ ಫೌಂಡೇಶನ್ ಈಗ ಮೂಲೆಗುಂಪಾಗಿದೆ ತಾಲೂಕಿನಲ್ಲಿ ಅಧಿಕಾರಿಗಳ ವರ್ಗಾವಣೆಯಲ್ಲೂ ಕಾಂಗ್ರೆಸ್ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿದರು.

ಪೆರ್ನಾಳೆ ಕೆರೆಯ ದುರಸ್ತಿ ವೇಳೆ ಊರವರು ಸಂಗ್ರಹಿಸಿದ ಹಣವನ್ನು ತಾನು ನೀಡಿದಂತೆ ರಕ್ಷಿತ್ ಶಿವರಾಂ ತೋರಿಸಿಕೊಂಡಿದ್ದಾರೆ. ಮಳೆ ಹಾನಿ ಪ್ರಕರಣಗಳಲ್ಲೂ ತಾಲೂಕಿನಲ್ಲಿ ಅಗತ್ಯ ಅನುದಾನ ಬಿಡುಗಡೆಯಾಗಿಲ್ಲ ಎಂದು ಹೇಳಿದರು. ಬಿಜೆಪಿ ಮಂಡಲ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ ಪಾರೆಂಕಿ, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಜಯನಂದ ಗೌಡ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!