- Advertisement -
- Advertisement -
ಮಂಗಳೂರು: ಈ ಆರ್ಥಿಕ ವರ್ಷದಿಂದ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಖರ್ಚು ಮಾಡಬೇಕು ಎಂಬುದಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಟ್ವೀಟ್ ಮಾಡಿದ್ದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಈ ಕುರಿತಂತೆ ಎಕ್ಸ್ ಮಾಡಿರುವ ಅವರು, ಈ ಆರ್ಥಿಕ ವರ್ಷದಿಂದ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ದಿಗೆ ಮಾತ್ರ ಉಪಯೋಗ ಆಗಬೇಕು ಎಂದಿದು ಆಗ್ರಹಿಸಿದ್ದಾರೆ.ಹಿಂದೂಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದೂಗಳಿಗೆ ಆಗುವ ಅನ್ಯಾಯ ಎಂಬುದಾಗಿ ಹೇಳಿದ್ದಾರೆ.
ಈ ಎಲ್ಲಾ ಕಾರಣದಿಂದಾಗಿ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದೂಗಳ ತೆರಿಗೆ, ಹಿಂದೂಗಳ ಹಕ್ಕು ಎಂಬುದಾಗಿ ತಿಳಿಸಿದ್ದಾರೆ.
- Advertisement -