- Advertisement -
- Advertisement -
ಬೆಳ್ತಂಗಡಿ: ಉಜಿರೆ ನಗರದ ನೂತನ ಚತುಷ್ಪಥ ರಸ್ತೆಯ ಮಧ್ಯದಲ್ಲಿ ಅಳವಡಿಸಲಾದ ಆಕರ್ಷಕ ದಾರಿ ದೀಪವನ್ನು ಶುಕ್ರವಾರ ರಾತ್ರಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು ಉಜಿರೆ ಗ್ರಾಮ ತಾಲೂಕಿನ ಕೇಂದ್ರವಾಗಿ ಬೆಳೆಯುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪಯೋಗಿ ಕೆಲಸಗಳ ಮೂಲಕ ಅಭಿವೃದ್ಧಿಪಡಿಸಲಾಗುವುದು ಎಂದರು. ಉಜಿರೆ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ,ಉಪಾಧ್ಯಕ್ಷ ರವಿ ಬರಮೇಲು ಸೇರಿದಂತೆ ಇತರರು ಉಪಸ್ಥಿತರಿದ್ದರು.
- Advertisement -