- Advertisement -
- Advertisement -
ಕೊಟ್ಟಿಗೆಹಾರ: ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಬಣಕಲ್ ನ ದಾಸರಹಳ್ಳಿಯ ಹರ್ಷ ಮೆಲ್ವಿನ್ ಲಸ್ರಾದೊ ನೇಮಕಗೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಹರ್ಷ ಮೆಲ್ವಿನ್ ಅವರು ಈವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದರು.ಪ್ರಸ್ತುತ ಕೆಪಿಸಿಸಿ ಸಮಿತಿಯ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಕೆ.ಅಬ್ದುಲ್ ಜಬ್ಬಾರ್ ಅವರು ಎಐಸಿಸಿ ಅಧ್ಯಕ್ಷರ ನಿರ್ದೇಶನದ ಮೇರೆಗೆ ಆದೇಶ ಪತ್ರ ನೀಡಿ ಉನ್ನತ ಹುದ್ದೆಗೆ ನೇಮಕ ಮಾಡಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಿದ್ದಾರೆ.
- Advertisement -