- Advertisement -
- Advertisement -
ನವದೆಹಲಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ನವದೆಹಲಿಯಲ್ಲಿ ಬಿಹಾರದ ಮುಖ್ಯಮಂತ್ರಿ ಹಾಗೂ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ.ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರ ನವದೆಹಲಿಯ ನಿವಾಸದಲ್ಲಿ ಈ ಭೇಟಿ ನಡೆದಿದೆ.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹಾಗೂ ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಅವರು ಕೂಡಾ ಉಪಸ್ಥಿತರಿದ್ದರು.ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಕಡಿತಗೊಂಡ ಬಳಿಕ ನಡೆದಿರುವ ಭೇಟಿ ಮಹತ್ವ ಪಡೆದಿದೆ.
ಜನತಾ ಪರಿವಾರ ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಕುಮಾರಸ್ವಾಮಿ ಮತ್ತು ನಿತೀಶ್ ಕುಮಾರ್ ನಡೆದಿದೆ ಎಂದು ಹೇಳಲಾಗಿದೆ.
- Advertisement -