Thursday, June 4, 2026
Homeಕರಾವಳಿಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

- Advertisement -
- Advertisement -

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಬೆಳ್ಳಿಪ್ಪಾಡಿಯ ಶ್ರೇಯಾ ಪಕ್ಕಳ (16) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರು ತಾಲ್ಲೂಕಿನ ಬೆಳ್ಳಿಪ್ಪಾಡಿ ಕುಂಡಾಪು ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಯ ಎರಡನೇ ಪುತ್ರಿಯಾಗಿದ್ದಾಳೆ.

ಆರೋಗ್ಯವಾಗಿದ್ದ ಶ್ರೇಯಾಳಿಗೆ ಏಕಾಏಕಿ ನಿನ್ನೆ ಬೆಳಿಗ್ಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿಗಿತ್ತು. ಅಷ್ಟರಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

- Advertisement -

Latest News

error: Content is protected !!