- Advertisement -
- Advertisement -
ಮಧುರೈ: ತಮಿಳುನಾಡಿನ ನವಬತ್ಕಾನಾ ಪ್ರದೇಶದ ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ ಉಂಟಾಗಿದೆ. ಬೆಂಕಿ ನಂದಿಸುವ ವೇಳೆಯಲ್ಲಿ ಇಬ್ಬರು ಅಗ್ನಿಶಾಮಕದಳದ ಸಿಬ್ಬಂದಿ ಏಕಾಏಕಿ ಕಟ್ಟಡ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದಾರೆ.
ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅನಾಹುತ ಸಂಭವಿಸಿದೆ.ಸತತ ಹಲವು ಘಂಟೆಗಳ ಕಾರ್ಯಾಚರಣೆ ನಂತರ ಬೆಂಕಿಯನ್ನು ನಂದಿಸಲಾಗಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
- Advertisement -