ದಕ್ಷಿಣ ಕನ್ನಡ : ಹವಾಮಾನ ಇಲಾಖೆಯ ಮುನ್ಸೂಚ ನೆಯಂತೆ ಜೂ. 11ರಿಂದ ಕರಾವಳಿ ಭಾಗದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದ್ದು, ಉತ್ತಮ ಮಳೆಯಾಗಲಿದೆ.
ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಇಂದು ಮತ್ತು ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ. ಜೂನ್ 13 ಮತ್ತು 14 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ.
ಕಳೆದ ಒಂದು ವಾರದ ಹಿಂದೆ ಮುಂಗಾರು ರಾಜ್ಯದ ಕರಾವಳಿಗೆ ಪ್ರವೇಶಿಸಿದರೂ ಮಳೆ ಅಷ್ಟೇನೂ ಸುರಿದಿರಲಿಲ್ಲ. ಆದರೆ, ಈಗ ಮುಂಗಾರು ಚರುಕನ್ನು ಪಡೆದಿದೆ. ಜೂನ್ 12 ರಿಂದ 15 ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಗಾಳಿ ಮಳೆಯಾಗುವ ಸಾಧ್ಯತೆಗಳ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಮತ್ತು ನಾಳೆ ಕರ್ನಾಟಕ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ 64.5 ಮೀಲಿ ಮೀಟರ್ ನಿಂದ 111.5 ಮಿಲಿ ಮೀಟರ್ ಮಳೆಯಾಗಲಿದೆ. ಜೂನ್13 ಮತ್ತು 14 ನೇ ರಂದು 115.6 ಮಿಲಿ ಮೀಟರ್ ನಿಂದ 204.4 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಗಳಿವೆ.ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಕಳೆದ ವರ್ಷ ಪ್ರವಾಹ ಪೀಡಿತ ಪ್ರದೇಶಗಳಾದ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕಕ್ಕಿಂಜೆ, ಕೊಲ್ಲಿ, ಕುಕ್ಕಾವು ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.