Wednesday, May 1, 2024
Homeಕರಾವಳಿಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ; ಕೆ. ಸೋಮನಾಥ ನಾಯಕ್‌ಗೆ ಜೈಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್...

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ; ಕೆ. ಸೋಮನಾಥ ನಾಯಕ್‌ಗೆ ಜೈಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ಆದೇಶ

spot_img
- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿಯ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗು ಅಲ್ಲಿಯ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಸೋಮನಾಥ ಅವರು ತನಗೆ ನ್ಯಾಯಾಲಯ ವಿಧಿಸಿದ ಜೈಲು ಶಿಕ್ಷೆ, ಆಸ್ತಿ ಮುಟ್ಟುಗೋಲು ಹಾಗು ದಂಡನೆಯನ್ನು ರದ್ದುಗೊಳಿಸುವಂತೆ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದರು


ಎರಡೂ ಕಡೆಯ ವಾದ ಆಲಿಸಿದ ಉಚ್ಚ ನ್ಯಾಯಾಲಯವು ದಿನಾಂಕ:05-05-2022 ರಂದು ತನ್ನ 148 ಪುಟಗಳ ಸುಧೀರ್ಘ ತೀರ್ಪು ಪ್ರಕಟಿಸಿ ಬೆಳ್ತಂಗಡಿ ಸಿವಿಲ್ ನ್ಯಾಯಾಲಯಗಳ ಆದೇಶವನ್ನು ಎತ್ತಿ ಹಿಡಿದು ಸೋಮನಾಥ ನಾಯಕರ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.
ಬೆಳ್ತಂಗಡಿ ನ್ಯಾಯಾಲಯ ಈಗಾಗಲೇ ಸೋಮನಾಥ ನಾಯಕರ ವಿರುದ್ಧ ಬಂಧನದ ವಾರೆಂಟ್ ಹೊರಡಿಸಿದೆ.


ನ್ಯಾಯಾಲಯದ ಆದೇಶದಲ್ಲಿ ಸೋಮನಾಥ ನಾಯಕರು ಹೆಗ್ಗಡೆಯವರ ವಿರುದ್ಧ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಸಹ ಉಲ್ಲಂಘಿಸಿ ಸುಳ್ಳು ಆರೋಪ ಮಾಡಿರುವುದು ಸಾಬೀತಾಗಿದೆ. ಹೆಗ್ಗಡೆಯವರು ಮಿತಿಗಿಂತ ಜಾಸ್ತಿ ಸ್ಥಿರಾಸ್ತಿ ಹೊಂದಿರುತ್ತಾರೆ ಎಂಬುವುದಾಗಿ ಮಾಡುತ್ತಿರುವ ಆರೋಪಗಳು ಸುಳ್ಳು. ಈ ಪ್ರಕರಣದ ದಾಖಲೆಗಳನ್ನು ಪರಾಮರ್ಶಿಸುವಾಗ ಹೆಗ್ಗಡೆಯವರು ಮತ್ತವರ ಕುಟುಂಬದವರು ತಮ್ಮ ಬಹಳಷ್ಟು ಆಸ್ತಿಗಳನ್ನು ಸಾಗುವಳಿದಾರರಿಗೆ ಬಿಟ್ಟುಕೊಟ್ಟಿರುವುದು ಕಂಡುಬರುತ್ತದೆ. ರಾಜ್ಯದೆಲ್ಲೆಡೆ ತುಳಿತಕ್ಕೊಳಗಾದವರ ಏಳಿಗೆಗಾಗಿ, ಮಹಿಳಾ ಸಬಲೀಕರಣಕ್ಕಾಗಿ, ಇನ್ನೂ ಹಲವಾರು ಸಮಾಜಮುಖಿ ಕೈಂಕರ್ಯಗಳನ್ನು ಹೆಗ್ಗಡೆಯವರು ಮಾಡುತ್ತಿರುವುದು ಕಂಡುಬರುತ್ತದೆ.


ಹೆಗ್ಗಡೆಯವರಿಗೆ ಅವರ ಸಮಾಜಮುಖಿ ಸೇವೆಗಳನ್ನು ಪರಿಗಣಿಸಿ ನಮ್ಮ ದೇಶದ ಸರಕಾರಗಳು ಪದ್ಮವಿಭೂಷಣ ಸಹಿತ ಹಲವಾರು ಉನ್ನತ ಪ್ರಶಸ್ತಿಗಳನ್ನು ನೀಡಿ ಗೌರವಿಸಿರುವುದು ಕಂಡುಬರುತ್ತದೆ. ನಮ್ಮ ದೇಶದ ಜನತೆಯು ಹೆಗ್ಗಡೆಯವರನ್ನು ಧರ್ಮಾಧಿಕಾರಿಯೆಂದು ಗೌರವ ಭಾವನೆಯಿಂದ ಕಾಣುತ್ತಿದ್ದಾರೆ.


ಹೆಗ್ಗಡೆಯವರ ಸಚ್ಚಾರಿತ್ರ್ಯಕ್ಕೆ ಹಾಗೂ ಕ್ಷೇತ್ರದ ಘನತೆಗೆ ದಕ್ಕೆ ತರುವ ದುರುದ್ದೇಶದಿಂದ ಸೋಮನಾಥ ನಾಯಕ್‌ರವರು ಎಗ್ಗಿಲ್ಲದೆ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನೂ ಸಹ ಉಲ್ಲಂಘಿಸಿ ಸುಳ್ಳು ಆರೋಪಗಳನ್ನು ಸಾರ್ವಜನಿಕ ಮಾಧ್ಯಮ ಹಾಗು ಜಾಲತಾಣಗಳಲ್ಲಿ ಮಾಡುತ್ತಿರುವುದು ಕ್ಷಮಾರ್ಹವಲ್ಲ.


ಹೆಗ್ಗಡೆಯವರು ಹಾಗು ಅವರ ಕುಟುಂಬದವರ ವಿರುದ್ಧ ಆರೋಪ ಮಾಡುವುದರ ಹೊರತು ಸಮಾಜಕ್ಕೆ ತನ್ನ ಕೊಡುಗೆ ಏನು ಎಂಬುವುದನ್ನು ನ್ಯಾಯಾಲಯಕ್ಕೆ ತಿಳಿಸುವಲ್ಲಿ ಸಹ ಸೋಮನಾಥ ನಾಯಕ್ ವಿಫಲವಾಗಿದ್ದಾರೆ. ನ್ಯಾಯಾಲಯದ ಮುಂದೆ ಅಪರಾಧವ ಸಾಬೀತಾಗುವ ಸೋಮನಾಥ ನಾಯಕ್ ಕೊನೆಯ ಕ್ಷಣದಲ್ಲಿ, ತಾನು ಎಸಗಿರುವ ಎಲ್ಲಾ ಲಕ್ಷಣಗಳು ಕಂಡುಬಂದಾಗ ತನ್ನ ಕೃತ್ಯಗಳ ಬಗ್ಗೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿರುವುದು ಆತನ ರಾಷ್ಟ್ರತನವಲ್ಲದೆ ನ್ಯಾಯಾಲಯದ ಘನತೆಯ ಬಗ್ಗೆ ಆತನಿಗಿರುವ ಕೇವಲ ಭಾವವನ್ನು ಬಿಂಬಿಸುತ್ತದೆ.


ಪ್ರಕರಣದಲ್ಲಿ ನ್ಯಾಯಾಲಯದ ಮೇಲೆ ಸಾರ್ವಜನಿಕರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದಕ್ಕಾಗಿ ಮತ್ತು ನ್ಯಾಯಾಲಯದ ಘನತೆಯನ್ನು ರಕ್ಷಿಸುವ ಸಲುವಾಗಿ ಹಾಗೂ ಸೋಮನಾಥ ನಾಯಕ್‌ರನ್ನು ಶಿಕ್ಷಿಸದಿದ್ದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ಕಾನೂನಿನ ಉದ್ದೇಶ ಹಾಗೂ ಸಾಮರ್ಥ್ಯವನ್ನು ಸಾರುತ್ತಾ ಆದೇಶವನ್ನು ನೀಡಿದೆ.

- Advertisement -
spot_img

Latest News

error: Content is protected !!