- Advertisement -
- Advertisement -
ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅವರ ಮೇಲೆ ದಾಖಲಾಗಿದ್ದ ಬೆಳ್ತಂಗಡಿ ಠಾಣೆಯಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದ್ದಮೆ ವಿಚಾರವಾಗಿ ಇಂದು ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರಿಗೆ ಈ ಕೇಸ್ನಲ್ಲಿ ಬಂಧಿಸದಂತೆ ಹಾಗೂ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ನೀಡದಂತೆ ಮುಂದಿನ ಆದೇಶದ ವರೆಗೆ ಸರಕಾರಕ್ಕೆ ನಿರ್ದೇಶನ ನೀಡಿದೆ.
ಈ ಪ್ರಕರಣದಲ್ಲಿ ಹರೀಶ್ ಪೂಂಜ ಅವರ ಪರವಾಗಿ ಪ್ರಭುಲಿಂಗ ನಾವಡಗಿ ,ಪ್ರಸನ್ನ ದೇಶಪಾಂಡೆ ಅವರು ವಾದವನ್ನು ಮಂಡಿಸಿದರು.
- Advertisement -