Saturday, May 4, 2024
Homeಪ್ರಮುಖ-ಸುದ್ದಿಸಿಇಟಿ ರಾಂಕಿಂಗ್: ಹೈಕೋರ್ಟ್ ತೀರ್ಪಿನ ಬಗ್ಗೆ ಚರ್ಚಿಸಲು ಸಚಿವರ ನೇತೃತ್ವದಲ್ಲಿ ನಾಳೆ ಸಭೆ

ಸಿಇಟಿ ರಾಂಕಿಂಗ್: ಹೈಕೋರ್ಟ್ ತೀರ್ಪಿನ ಬಗ್ಗೆ ಚರ್ಚಿಸಲು ಸಚಿವರ ನೇತೃತ್ವದಲ್ಲಿ ನಾಳೆ ಸಭೆ

spot_img
- Advertisement -
- Advertisement -

ಬೆಂಗಳೂರು: 2020-21ರಲ್ಲಿ ದ್ವಿತೀಯ ಪಿಯುಸಿ ತೇರ್ಗಡೆಯಾಗಿ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನೂ ಪರಿಗಣಿಸುವಂತೆ ಹೈಕೋರ್ಟ್ ನೀಡಿರುವ ಆದೇಶ ಕುರಿತು ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ನಾಳೆ ಬೆಳಿಗ್ಗೆ ಮಹತ್ವದ ಸಭೆ ಕರೆದಿದ್ದಾರೆ.

ಈ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ‌ ಮಹೇಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಮತ್ತು ಕಾನೂನು ತಜ್ಞರು ಪಾಲ್ಗೊಳ್ಳಲಿದ್ದಾರೆ.

ಈ ಸಭೆಯಲ್ಲಿ ನ್ಯಾಯಾಲಯದ ತೀರ್ಪಿನ ಸಾಧಕ-ಬಾಧಕಗಳನ್ನು ಚರ್ಚಿಸಿ, ಮುಂದಿನ ಕ್ರಮ ಕುರಿತು ನಿರ್ಧರಿಸಲಾಗುತ್ತದೆ. 2020-21ರಲ್ಲಿ ಕೊರೋನಾ ಕಾರಣದಿಂದಾಗಿ ಪಿಯುಸಿ ಪರೀಕ್ಷೆ ನಡೆಸದೇ, ತೇರ್ಗಡೆ ಮಾಡಲಾಗಿತ್ತು. ನಂತರ ಸಿಇಟಿ ನಡೆಸಿ, ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಪರಿಗಣಿಸಿ, ವೃತ್ತಿಪರ ಶಿಕ್ಷಣ ಕೋರ್ಸುಗಳಿಗೆ ಪ್ರವೇಶ ಕೊಡಲಾಗಿತ್ತು.

ಆದರೆ ಹೀಗೆ ಪ್ರವೇಶಾವಕಾಶ ಪಡೆದುಕೊಂಡ 24 ಸಾವಿರ ವಿದ್ಯಾರ್ಥಿಗಳು ಈ ಬಾರಿಯೂ ಸಿಇಟಿ ಬರೆದಿದ್ದರು. ಅಲ್ಲದೇ ರ್ಯಾಂಕಿಂಗ್ ಪಟ್ಟಿಯಲ್ಲಿ ತಮ್ಮ ದ್ವಿತೀಯ ಪಿಯುಸಿ ಅಂಕಗಳನ್ನು ಕೂಡ ಪರಿಗಣಿಸಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದರು

ನಿನ್ನೆ ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸಿತ್ತು.

- Advertisement -
spot_img

Latest News

error: Content is protected !!