Thursday, May 16, 2024
Homeಕರಾವಳಿಉಡುಪಿಉಡುಪಿ: ಹಿಜಾಬ್ ಮತ್ತು ಕೇಸರಿ ಶಾಲು ವಿಚಾರವಾಗಿದೆ ಹೈಕೋರ್ಟ್ ಉತ್ತಮ ಆದೇಶ ನೀಡಿದೆ: ರಘುಪತಿ ಭಟ್

ಉಡುಪಿ: ಹಿಜಾಬ್ ಮತ್ತು ಕೇಸರಿ ಶಾಲು ವಿಚಾರವಾಗಿದೆ ಹೈಕೋರ್ಟ್ ಉತ್ತಮ ಆದೇಶ ನೀಡಿದೆ: ರಘುಪತಿ ಭಟ್

spot_img
- Advertisement -
- Advertisement -

ಉಡುಪಿ: ಹಿಜಾಬ್ ಮತ್ತು ಕೇಸರಿ ಶಾಲು ವಿಚಾರವಾಗಿದೆ ಹೈಕೋರ್ಟ್ ಉತ್ತಮ ಆದೇಶ ನೀಡಿದ್ದು, ನಾವೆಲ್ಲರೂ ಕೋರ್ಟ್ ಆದೇಶವನ್ನು ಪಾಲಿಸೋಣ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಹಿಜಾಬ್ ವಿವಾದದ ಬಗ್ಗೆ ಮುಂದಿನ ವಾರದಿಂದ ಪ್ರತಿದಿನ ವಿಚಾರಣೆ ನಡೆಯುತ್ತದೆ. ಇದೊಂದು ಜವಾಬ್ದಾರಿಯುತ ನಿರ್ಣಯ. ಮಕ್ಕಳ ಭವಿಷ್ಯಕ್ಕೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಈ ಆದೇಶ ನೀಡಿದೆ ಎಂದರು.

ಇನ್ನು ಮುಂದಿನ ಒಂದು ತಿಂಗಳಿನಲ್ಲಿ ಪರೀಕ್ಷೆ ಪ್ರಾರಂಭ ಆಗುತ್ತದೆ. ಹೆಚ್ಚು ರಜೆ ನೀಡಿದರೆ ಮಕ್ಕಳ ಭವಿಷ್ಯ ಕ್ಕೆ ತೊಂದರೆ ಆಗುತ್ತದೆ‌ ಎಂಬ ಹಿನ್ನಲೆ ಈ ಆದೇಶ ನೀಡಿದ್ದು, ಹಿಂದೆ ನಡೆದ ಘಟನೆಗಳನ್ನು ಮರೆತು ಕಾಲೇಜು ಪ್ರಾರಂಭಿಸಲು ಸಹಕರಿಸೋಣ ಎಂದಿದ್ದಾರೆ.

ನಮ್ಮ ಶೈಕ್ಷಣಿಕ ಭವಿಷ್ಯ ದೃಷ್ಟಿಯಿಂದ ಧಾರ್ಮಿಕ ಆಚರಣೆಗಳನ್ನು ಮನೆಯಲ್ಲಿ ಆಚರಿಸೋಣ. ಈಗಾಗಲೇ ಅಂತರಾಷ್ಟ್ರೀಯ ಮಟ್ಟದಲ್ಲಿ ಈ ವಿಚಾರ ಚರ್ಚೆ ಆಗಿದೆ. ನಾವು ಏನೇ ಇದ್ದರೂ ಒಟ್ತಾಗಿದ್ದೇವೆ ಎಂಬ ಸಂದೇಶ ನೀಡೋಣ . ಸರಕಾರ ನಾಳೆಯಿಂದ ಕ್ಲಾಸ್ ಗಳನ್ನು ಪ್ರಾರಂಭಿಸಲಿ. ಕೇಸರಿ ಶಾಲನ್ನು ಹಾಕಬೇಡಿ. ಹಿಜಾಬ್ ಅನ್ನು ಕ್ಲಾಸ್ ನ ಒಳಗೆ ಹಾಕಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!