- Advertisement -
- Advertisement -
ಧಾರವಾಡ: ಮೆದುಳು ನಿಷ್ಕ್ರಿಯವಾದ ಹಿಂದೂ ಬಾಲಕಿಯ ಹೃದಯವನ್ನು ಮುಸ್ಲಿಂ ಯುವಕನಿಗೆ ಕಸಿ ಮಾಡುವ ಮೂಲಕ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯ ವೈದ್ಯರು ಸಾರ್ಥಕತೆ ಮೆರೆದಿದ್ದಾರೆ.
ಉತ್ತರ ಕನ್ನಡ ಮೂಲದ 15 ವರ್ಷದ ಬಾಲಕಿ ಅಪಘಾತದಲ್ಲಿ ಗಾಯಗೊಂಡು ಧಾರವಾಡ ಎಸ್ಡಿಎಂ ಆಸ್ಪತ್ರೆಗೆ ದಾಖಲಾಗಿದ್ದಳು. ಈ ವೇಳೆಯಲ್ಲಿ ಬಾಲಕಿಗೆ ಚಿಕಿತ್ಸೆ ಫಲಕಾರಿಯಾಗದೇ ಮಿದುಳು ನಿಷ್ಕ್ರಿಯವಾಗಿತ್ತು
ಇದೇ ವೇಳೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಮುಸ್ಲಿಂ ಯುವಕನೊಬ್ಬ ಹೃದ್ರೋಗದಿಂದ ಬಳಲುತ್ತಿದ್ದ. . ಬಾಲಕಿಯ ಪೋಷಕರ ಸಮ್ಮತಿ ಮೇರೆಗೆ ಹೃದಯ ಕಸಿ ಮಾಡಲು ಒಪ್ಪಿಗೆ ನೀಡಿದ್ದರು. ಜೀರೋ ಟ್ರಾಫಿಕ್ನಲ್ಲಿ ಎರಡು ಪೊಲೀಸ್ ಬೆಂಗಾವಲು ವಾಹನದ ಸಹಾಯದಿಂದ ಕೆಎಲ್ಇ ಆಸ್ಪತ್ರೆಯಿಂದ ಬಾಲಕಿಯ ಹೃದಯವನ್ನು 50 ನಿಮಿಷಗಳಲ್ಲಿ ಧಾರವಾಡದಿಂದ ಬೆಳಗಾವಿಗೆ ತಲುಪಿಸಲಾಗಿತ್ತು.ಬಳಿಕ ಯುಬಕನಿಗೆ ಕಸಿ ಮಾಡಲಾಗಿದೆ. ಈ ಮೂಲಕ ಬಾಲಕಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ.
- Advertisement -