- Advertisement -
- Advertisement -
ಪುತ್ತೂರು: ಜೊತೆಯಾಗಿದ್ದ ಅನ್ಯಕೋಮಿನ ಯುವಕ ಮತ್ತು ಯುವತಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ಮಂಜಲಡ್ಪು ಸಮೀಪ ನಡೆದಿದೆ.
ಸವಣೂರು ಮೂಲದ ಅನ್ಯಕೋಮಿನ ಯುವಕ- ಹಿಂದೂ ಯುವತಿಯನ್ನು ಕೆಲಸ ಕೊಡಿಸುವುದಾಗಿ ಮಂಜಲಡ್ಪು ಬಳಿ ಕರೆಸಿದ್ದಾನೆ ಎನ್ನಲಾಗಿದೆ.ಈ ಬಗ್ಗೆ ವಿಷಯ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- Advertisement -