Tuesday, May 21, 2024
Homeಕರಾವಳಿಕಡಬ: ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋ ಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು;  ಹಿಂದೂ ಸಂಘಟನೆಯ...

ಕಡಬ: ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋ ಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು;  ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ರಾತ್ರಿ ಪ್ರತಿಭಟನೆ ; ಪ್ರತಿಭಟನಾಕಾರರಿಗೆ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಹರೀಶ್ ಪೂಂಜ ಸಾಥ್

spot_img
- Advertisement -
- Advertisement -

ಕಡಬ:  ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋ ಸಾಗಾಟದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾ.30 ರ ಸಂಜೆ ನಡೆದಿತ್ತು. ನೆಕ್ಕಿತ್ತಡ್ಕದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಮೃತ ದುರ್ದೈವಿ.ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಡಿಕ್ಕಿಯಾಗಿದ್ದು, ಕಾರನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದ.ಆರೋಪಿಗಳು ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ದಿ| ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿ ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿದ್ದಾರೆ.

ವಿಠಲ ರೈ ಅವರಿಗೆ ಡಿಕ್ಕಿ ಹೊಡೆದ ಕಾರು ಎಸ್ಕೇಪ್ ಆಗಿತ್ತು. ಇಷ್ಟಾಗುತ್ತಿದ್ದಂತೆ ಕಾರಿನ ಕುರಿತು ಸಾರ್ವಜನಿಕರು ಮಾಹಿತಿ ಕಲೆ ಹಾಕಿದ್ದು ಈ ವೇಳೆ  ಕಾರಿನಲ್ಲಿ 2 ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಪ್ರತಿಭಟನೆಗೆ ಶಾಸಕಿ ಭಾಗೀರಥಿ ಮುರುಳ್ಯ,ಶಾಸಕ ಹರೀಶ್ ಪೂಂಜ ಸಾಥ್

ಇಷ್ಟಾಗುತ್ತಿದ್ದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ರಾಜ್ಯ ರಸ್ತೆ ತಡೆದು ಪ್ರತಿಭಟನೆಗೆ ನಡೆಸಿದರು.ಘಟನೆಯ ವಿರುದ್ದ ರೊಚ್ಚಿಗೆದ್ದ ಹಿಂದೂ ಸಂಘಟನೆಗಳು ಕಡಬ ಆಸ್ಪತ್ರೆಯ ಬಳಿ ಮೊದಲು ಬೃಹತ್ ಪ್ರತಿಭಟನೆ ನಡೆಸಿದರು,ಎಸ್.ಪಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದ್ರು.ಇನ್ನು ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರಿಗೆ ಬೆಂಬಲ ಸೂಚಿಸಿದ್ರು, ಯಾರದೇ ಒತ್ತಡ ವಿದ್ದರೂ ಕಾನೂನು ಪ್ರಕಾರ ಸೂಕ್ತ ಕ್ರಮ ಜನರುಗಿಸುವಂತೆ ಪೊಲೀಸರಿಗೆ ಎಚ್ಚರಿಕೆ ನೀಡಿದರು.

ಮಧ್ಯರಾತ್ರಿ ಸ್ಥಳಕ್ಕೆ ಎಸ್ಪಿ ಭೇಟಿ

ಇನ್ನು ಪ್ರತಿಭಟನಾಕಾರು ದಕ್ಷಿಣಕನ್ನಡ ಎಸ್ಪಿ ಸ್ಥಳಕ್ಕೆ ಬರೋವರೆಗೂ ಯಾವುದೇ ಕಾರಣಕ್ಕೂ ಪ್ರತಿಭಟನೆ ಕೈಬಿಡಲ್ಲ ಎಂದು ಪಟ್ಟು ಹಿಡಿದ್ರಿಂದ  ಮಧ್ಯರಾತ್ರಿ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿದರು. ಪ್ರತಿಭಟನಾನಿರತರು ಹಾಗೂ ಶಾಸಕರುಗಳ ಜೊತೆ ಮಾತುಕತೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮಕೈಗೊಳ್ಳೋದಾಗಿ ಭರವಸೆ ನೀಡಿದರು.ಭಾನುವಾರ ಮಧ್ಯಾಹ್ನದ ಒಳಗೆ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನಾಕಾರರು ಡೆಡ್ ಲೈನ್ ನೀಡಿದ್ದಾರೆ. ಆರೋಪಿಗಳನ್ನು ತ್ವರಿತವಾಗಿ ಬಂಧಿಸುವ ಎಲ್ಲಾ ಪ್ರಕ್ರಿಯೆ ಗಳನ್ನು ಮಾಡುವ ಭರವಸೆ ನೀಡಿದ್ದಾರೆ.

- Advertisement -
spot_img

Latest News

error: Content is protected !!