- Advertisement -
- Advertisement -
ಮಂಗಳೂರು: ಕಾರಿಂಜ ದೇವಸ್ಥಾನದ ಬಳಿ ಅನ್ಯಕೋಮಿನ ಮೆಡಿಕಲ್ ಸ್ಟೂಡೆಂಟ್ ಗಳೊಂದಿಗೆ ಹಿಂದೂ ಯುವತಿಯರು ತಿರುಗಾಡುತ್ತಿರುವುದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ಗಮನಕ್ಕೆ ಬರುತ್ತಿದ್ದಂತೆ ಕಾರ್ಯಪ್ರವೃತ್ತರಾದ ಕಾರ್ಯಕರ್ತರು ಪತ್ತೆಹಚ್ಚಿ ಪುಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಲವ್ ಜಿಹಾದ್ ಶಂಕೆ ವ್ಯಕ್ತವಾಗಿದ್ದು ಪೊಲೀಸರೊಂದಿಗೆ ಹಿಂದೂ ಜಾಗರಣ ವೇದಿಕೆ ಮುಖಂಡರು ಮಾತುಕತೆ ನಡೆಸಿ ತನಿಖೆ ಕೈಗೊಂಡು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೂ ಇವರು ಮಂಗಳೂರು ಖಾಸಗಿ ಮೆಡಿಕಲ್ ಕಾಲೇಜ್ ವಿಧ್ಯಾರ್ಥಿಗಳು. ಯುವಕರು ಕೇರಳ ಮೂಲದವರು ಮತ್ತು ಹಿಂದೂ ಯುವತಿ ಸಾಗರ ಮತ್ತೊಬ್ಬಳು ಬೆಳ್ತಂಗಡಿ ತಾಲೂಕಿನ ವೇಣೂರಿನವಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ ಮನೆ ಮಂದಿ ಬಂದು ಸೂಕ್ತ ಮುಚ್ಚಳಿಕೆ ಬರೆಸಿ ಬಿಡಲಾಗಿದೆ ಎಂದು ಪುಂಜಾಲಕಟ್ಟೆ ಪೊಲೀಸರು ಮಾಹಿತಿ ನೀಡಿದ್ದಾರೆ.
- Advertisement -