- Advertisement -
- Advertisement -
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳಾಗ್ತಿದ್ದು, ಹಿಂದೂಪರರು ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಈಗಾಗಲೇ ಸ್ಥಾಪನೆಯಾಗಿರುವ ಹಿಂದೂಸ್ಥಾನ ಜನತಾ ಪಾರ್ಟಿಯನ್ನು ಬಲಗೊಳಿಸಲು ಮುಂದಾಗಿದ್ದಾರೆ.
ವಿನಾಯಕ ಎನ್ನುವವರಿಂದ 2014ರಲ್ಲೇ ರಾಷ್ಟ್ರೀಯ ಪಕ್ಷವಾಗಿ ನೋಂದಣಿಯಾಗಿರುವ ಈ ಪಾರ್ಟಿ ರಾಜ್ಯದಲ್ಲಿ ಸಕ್ರಿಯವಾಗಿಲ್ಲ. ಆದ್ರೆ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯಿಂದ ಹಿಂದೂಗಳಿಗೆ ರಕ್ಷಣೆಯಿಲ್ಲ ಎನ್ನುವ ಭಾವನೆ ಜನರಲ್ಲಿ ಮೂಡಿದೆ. ಹೀಗಾಗಿ ಹಿಂದೂಸ್ಥಾನ ಜನತಾ ಪಾರ್ಟಿ ಮೂಲಕ ಹಿಂದೂಗಳಿಗೆ ರಕ್ಷಣೆ ನೀಡಲು ಮುಂದಾಗಿದ್ದಾರೆ.
ಆಗಸ್ಟ್ 7 ರಂದು ಹಿಂದೂಸ್ಥಾನ ಜನತಾ ಪಾರ್ಟಿ ಬೆಂಗಳೂರಿನಲ್ಲಿ ಸಭೆ ಸೇರಿ ನೂತನ ಪದಾಧಿಕಾರಿಗಳ ಆಯ್ಕೆಗೆ ಮುಂದಾಗಿದೆ ಎಂದು ತಿಳಿದು ಬಂದಿದೆ.
- Advertisement -