- Advertisement -
- Advertisement -
ಗುರುವಾಯನೆಕೆರೆ: ವಾಕಿಂಗ್ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಾರುತಿ ಓಮಿನಿ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಇಂದು ಬೆಳಿಗ್ಗೆ ಬೆಳ್ತಂಗಡಿಯ ಗುರುವಾಯನಕೆರೆ ಬಳಿ ಕುಂಡುಪಳಿಕೆಯಲ್ಲಿ ನಡೆದಿದೆ.
ಘಟನೆಯಲ್ಲಿ ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ಸ್ಥಳೀಯ ವಸತಿಗೃಹವೊಂದರಲ್ಲಿ ತಂಗಿದ್ದು, ಇಂದು ಬೆಳಿಗ್ಗೆ ವಾಕಿಂಗ್ ತೆರಳುವಾಗ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ವ್ಯಕ್ತಿಗೆ ಕಾಲು ಮತ್ತು ತಲೆಗೆ ಗಂಭೀರವಾಗಿ ಗಾಯವಾಗಿದೆ.
ಸ್ಥಳೀಯ ನಿವಾಸಿ ಸುರೇಶ್ ಶೆಟ್ಟಿ ಮುಂಗೇಲು ಕೂಡಲೇ ಈ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲು ನೆರವಾಗಿ, ಘಟನೆಯ ಮಾಹಿತಿಯನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿರುತ್ತಾರೆ.
- Advertisement -