Thursday, May 2, 2024
Homeಕರಾವಳಿಮಂಗಳೂರು; ಕರ್ತವ್ಯದಲ್ಲಿದ್ದ ವೇಳೆ ಕಾರು ಡಿಕ್ಕಿಯಾಗಿ ಪರಾರಿ; ಹೆಡ್ ಕಾನ್ಸ್ಟೇಬಲ್ ಸ್ಥಿತಿ ಗಂಭೀರ

ಮಂಗಳೂರು; ಕರ್ತವ್ಯದಲ್ಲಿದ್ದ ವೇಳೆ ಕಾರು ಡಿಕ್ಕಿಯಾಗಿ ಪರಾರಿ; ಹೆಡ್ ಕಾನ್ಸ್ಟೇಬಲ್ ಸ್ಥಿತಿ ಗಂಭೀರ

spot_img
- Advertisement -
- Advertisement -

ಮಂಗಳೂರು; ಟ್ರಾಫಿಕ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹೆಡ್ ಕಾನ್ಸ್ಟೇಬಲ್ ಗೆ ಕಾರು ಡಿಕ್ಕಿಯಾಗಿ ಪರಾರಿಯಾದ ಘಟನೆ ಉಳ್ಳಾಲಬೈಲಿನಲ್ಲಿ ನಡೆದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕೇಶ್ ನಾಯ್ಕ್ ಗಾಯಗೊಂಡವರು.

ಲೋಕೇಶ್ ನಾಯ್ಕ್ ಹಾಗೂ ಎಎಸ್ ಐ ಮಂಜುಳಾ ಅವರು ಹೈವೇ ಪೆಟ್ರೋಲ್ ವಾಹನದಲ್ಲಿ ಉಳ್ಳಾಲಬೈಲಿನಲ್ಲಿ ಇಂದು ಸಂಜೆ ಗಸ್ತಿನಲ್ಲಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಬರುತ್ತಿದ್ದ ಸ್ವಿಫ್ಟ್ ಕಾರನ್ನು ಲೋಕೇಶ್ ತಪಾಸಣೆಗಾಗಿ ಸೈಡ್ ಗೆ ನಿಲ್ಲಿಸುವಂತೆ ಹೇಳಿದ್ದಾರೆ. ಈ ವೇಳೆ ಕಾರು ಲೋಕೇಶ್ ಅವರಿಗೆ ಏಕಾಏಕಿ ಡಿಕ್ಕಿಯಾಗಿದೆ. ಪರಿಣಾಮ ಲೋಕೇಶ್ ನಾಯ್ಕ್ ಡಿವೈಡರ್ ಗೆ ಎಸೆಯಲ್ಪಟ್ಟಿದ್ದಾರೆ. ಅಪಘಾತದ ಬಳಿಕ ಕಾರು ನಿಲ್ಲಿಸಿದೇ ಚಾಲಕ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಲೋಕೇಶ್ ನಾಯ್ಕ್ ಅವರನ್ನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!