- Advertisement -
![]()
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಇದೇ ವೇಳೆ ಮೀನುಗಾರರು ಕೂಡಾ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ನದಿ ಮತ್ತು ಸಮುದ್ರ ತೀರದ ಜನರು ಎಚ್ಚರ ವಹಿಸಲು ತಿಳಿಸಲಾಗಿದೆ.
ಈ ಮಧ್ಯೆ ಹವಾಮಾನ ಇಲಾಖೆಯಿಂದ ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
- Advertisement -


