Sunday, June 29, 2025
Homeತಾಜಾ ಸುದ್ದಿಸಿದ್ದರಾಮಯ್ಯ ಸರ್ಕಾರದ ಹೊಲಸು: ದುರ್ನಾತದ ಬಗ್ಗೆ ದಾಖಲೆ ಕೊಡಬಲ್ಲೆ: ಗೃಹ ಸಚಿವ ಆರಗ ಜ್ಞಾನೇಂದ್ರ ಸವಾಲು

ಸಿದ್ದರಾಮಯ್ಯ ಸರ್ಕಾರದ ಹೊಲಸು: ದುರ್ನಾತದ ಬಗ್ಗೆ ದಾಖಲೆ ಕೊಡಬಲ್ಲೆ: ಗೃಹ ಸಚಿವ ಆರಗ ಜ್ಞಾನೇಂದ್ರ ಸವಾಲು

spot_img
- Advertisement -
- Advertisement -

ಬೆಂಗಳೂರು; ಸಿದ್ದರಾಮಯ್ಯ ಸರ್ಕಾರದ ಹೊಲಸು, ದುರ್ನಾತದ ದಾಖಲೆ ಕೊಡಬಲ್ಲೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸವಾಲು ಹಾಕಿದರು.‌

ವಿಕಾಸಸೌಧದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್ ಐ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿದರು. ಪಿಎಸ್ಐ ಅಕ್ರಮದ ತ‌ನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದ್ದು,‌ ಯಾವ ಒತ್ತಡ ಏನೂ ಇಲ್ಲ. ಬದಲಾಗಿ ಗಂಭೀರವಾಗಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸಿಐಡಿಗೆ ಫ್ರೀ ಹ್ಯಾಂಡ್ ನೀಡಿದ್ದೇವೆ. ಹಾಗಿದ್ದರೂ ವಿರೋಧ ಪಕ್ಷದ ಮುಖಂಡರು ಇಂತಹ ಹೇಳಿಕೆ ಕೊಟ್ಟು ರಾಜಕೀಯ ಮಾಡಬಾರದು ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಿರಿಯ ರಾಜಕಾರಣಿಗಳು. ಅವರ ಆಡಳಿತ ಅವಧಿಯಲ್ಲಿ ಎಷ್ಟು ಹೊಲಸು ಹಾಗೂ ದುರ್ನಾತವಿತ್ತು ಎಂಬ ಬಗ್ಗೆ ದಾಖಲೆ ನೀಡಬಲ್ಲೆ. ಇವಾಗ ಚಾರಿತ್ರ್ಯ ಹರಣ ಮಾಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನು ನನ್ನ ಅವಧಿಯಲ್ಲಿ ಹಗರಣಗಳು ನಡೆಸಿದ್ದರೆ ಅದನ್ನು ತನಿಖೆ ಮಾಡಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ, ಸಮಯ ಬಂದಾಗ ಯಾವುದೇ ಇತರ ಪ್ರಕರಣದ ತನಿಖೆ ಮಾಡುವುದು ತಪ್ಪಲ್ಲ. ನಮ್ಮ ಕಣ್ಣ ಮುಂದೆ ಇರುವುದು ಸದ್ಯ ಪಿಎಸ್ಐ ಹಗರಣದ ತನಿಖೆ. ಈ ಪ್ರಕರಣದಲ್ಲಿ
ಮಧ್ಯವರ್ತಿ, ಹಣ ಕೊಟ್ಟವರ ವಿರುದ್ಧವೂ ಕ್ರಮ ಆಗುತ್ತಿದೆ. ಇನ್ನೊಮ್ಮೆ ಪರೀಕ್ಷೆಯಲ್ಲಿ ಇಂತಹ ಘಟನೆ ಆಗಬಾರದು. ಸದ್ಯ ತನಿಖೆ ಆಗುತ್ತಿದೆ, ಗೃಹ‌ ಸಚಿವನಾಗಿ ನಾನು ಯಾವುದೇ ಊಹೆಯ ಮಾತು ಹೇಳಲ್ಲ ಎಂದರು.

- Advertisement -
spot_img

Latest News

error: Content is protected !!