- Advertisement -
- Advertisement -
ಬೆಳ್ತಂಗಡಿ, ಜೂ.9: ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಲೋಕಕ್ಕೆ ಬಂದಿರುವ ಕಂಟಕವನ್ನು ನಿವಾರಿಸಿ, ರಾಷ್ಟ್ರಕ್ಕೆ ಒಳಿತಾಗುವಂತೆ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಪ್ರಾಥನೆ ನಡೆಸಲಾಯಿತು.
ಇದೇ ಸಂದರ್ಭ ಅವರು ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು. ಸಚಿವರೊಂದಿಗೆ ಶಾಸಕ ಹರೀಶ್ ಪೂಂಜಾ ಹಾಗೂ ಇತರರು ಉಪಸ್ಥಿತರಿದ್ದರು.
- Advertisement -