- Advertisement -
- Advertisement -
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ 75 ವೀರ ಯೋಧರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಇಂದಬೆಟ್ಟು ಮಹಾಶಕ್ತಿ ಕೇಂದ್ರ, ನಡ, ನಾವೂರು, ಇಂದಬೆಟ್ಟು, ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯವರ, ಮುಂಡಾಜೆ, ಗ್ರಾಮಗಳ ಮಾಜಿ ಸೈನಿಕರ ಮನೆಗೆ ಭೇಟಿ ಮಾಡಿ ಅವರನ್ನು ಸನ್ಮಾನಿಸಿ ಆಶೀರ್ವಾದ ಪಡೆಯಲಾಯಿತು.
ಈ ಸಂದರ್ಭದಲ್ಲಿ ಮಂಡಲ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರಶಾಂತ್, ಮಂಡಲ ಸದಸ್ಯ ರಾಜೇಶ್ ಕುಕ್ಕಾವ್, ಯುವಮೋರ್ಚ್ ಮಹಾಶಕ್ತಿ ಕೇಂದ್ರದ ಪ್ರಶಾಂತ್ ಕಾಣರ್ಪ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
- Advertisement -