- Advertisement -
- Advertisement -
ಹೊಸದಿಲ್ಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 151 ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 116ನೇ ಜನ್ಮದಿನ. ಹೀಗಾಗಿ ಮಹಾತ್ಮ ಗಾಂಧಿ ಸ್ಮಾರಕ ರಾಜ್ ಘಾಟ್ ಮತ್ತು ಶಾಸ್ತ್ರೀ ಸ್ಮಾರಕವಿರುವ ವಿಜಯ್ ಘಾಟ್ ಗೆ ತೆರಳಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು.
ಸಮೃದ್ಧ ಮತ್ತು ಸಹಾನುಭೂತಿಯ ಭಾರತವನ್ನು ರಚಿಸಲು ಬಾಪು ಅವರ ಆದರ್ಶಗಳು ನಮಗೆ ಮಾರ್ಗದರ್ಶನ ನೀಡಲಿ.ಗಾಂಧಿ ಜಯಂತಿಯಂದು ಪ್ರೀತಿಯ ಬಾಪುವಿಗೆ ನಮಸ್ಕರಿಸುತ್ತೇನೆ. ಅವರ ಜೀವನ ಮತ್ತು ಉದಾತ್ತ ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು.
- Advertisement -