- Advertisement -
- Advertisement -
ಕುಂದಾಪುರ: ಕೋವಿಡ್ನಿಂದ ಆರ್ಥಿಕ ಸಂಕಷ್ಟ ಉಂಟಾಗಿ ಸಾಲ ತೀರಿಸಲಾಗದೇ ಹೋಟೆಲ್ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.
ಮನನೊಂದ ಕಾಳಾವರದ ಶಾಲೆಯ ಬಳಿ ನಂದಿಕೇಶ್ವರ ಹೋಟೆಲ್ ಮಾಲೀಕ ರಾಘವೇಂದ್ರ ಗಾಣಿಗ(42) ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಮನೆ ಸಮೀಪದ ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -