Friday, June 27, 2025
Homeಕರಾವಳಿಬಂಟ್ವಾಳ; ಕೈ ನೋವೆಂದು ಆಸ್ಪತ್ರೆಗೆ ತೆರಳಿದ ಹೋಟೆಲ್ ಮಾಲೀಕ ನಾಪತ್ತೆ

ಬಂಟ್ವಾಳ; ಕೈ ನೋವೆಂದು ಆಸ್ಪತ್ರೆಗೆ ತೆರಳಿದ ಹೋಟೆಲ್ ಮಾಲೀಕ ನಾಪತ್ತೆ

spot_img
- Advertisement -
- Advertisement -

ಬಂಟ್ವಾಳ; ಕೈ ನೋವೆಂದು ಆಸ್ಪತ್ರೆಗೆ ತೆರಳಿದ ಹೋಟೆಲ್ ಮಾಲೀಕ ನಾಪತ್ತೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ಸಂದೀಪ್ ಜೈನ್ ನಾಪತ್ತೆಯಾದ ಯುವಕ.

ಸಂದೀಪ್ ಜೈನ್ ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಲ್ ಬೆಟ್ಟು ಎಂಬಲ್ಲಿ ವಾಸ್ತವ್ಯವಿದ್ದು, ಪ್ರಸ್ತುತ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿರುವ ಜೈನ್ ರೆಸ್ಟೋರೆಂಟ್ ಎಂಬ ಹೆಸರಿನ ಹೋಟೆಲ್  ನಡೆಸಿಕೊಂಡಿದ್ದರು. ಜು.31 ರಂದು ಕೈ ನೋವು ಎಂದು ವೈದ್ಯರ ಬಳಿ ಹೋಗಿ ಬರುತ್ತೇನೆ ಎಂದು ಹೋಟೆಲ್ ನಿಂದ ಆಕ್ಟೀವಾದಲ್ಲಿ ತೆರಳಿದ ಅವರು ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಂದೀಪ್ ಅವರ ಪತ್ನಿ ಅಕ್ಷತಾ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪುಂಜಾಲಕಟ್ಟೆ ಪೊಲೀಸರು ಸಂದೀಪ್ ಪತ್ತೆಯಾದಲ್ಲಿ 08256-286375 ಅಥವಾ 0824-2220500 ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!