Saturday, April 27, 2024
Homeಕರಾವಳಿಮಂಗಳೂರು; ಮನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ; ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗಾಹುತಿ

ಮಂಗಳೂರು; ಮನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ; ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗಾಹುತಿ

spot_img
- Advertisement -
- Advertisement -

ಮಂಗಳೂರು: ಮನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿ ಲಕ್ಷಾಂತರ ರೂಪಾಯಿಯ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಸುರತ್ಕಲ್‌ ಸಮೀಪದ ಬಾಂಗ್ಲಾ ವಠಾರದಲ್ಲಿ ನಡೆದಿದೆ. ಉಮೇಶ ಆಚಾರ್ಯ ಎಂಬವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ರಿಡ್ಜ್ ನಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯ ಎಲ್ಲ ಕಡೆ ವ್ಯಾಪಿಸಿದೆ.ತಕ್ಷಣ ಸ್ಥಳೀಯ ಮನೆಯವರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಗ್ನಿ ಶಾಮಕ ಆಗಮಿಸಿದಾಗ ಬಹುತೇಕ ಮನೆಯನ್ನು ಬೆಂಕಿ ಆವರಿಸಿಕೊಂಡಿತ್ತು.

ಬಟ್ಟೆ, ಪಾತ್ರೆ, ಟಿವಿ ಸಹಿತ ಎಲ್ಲ ಉಪಕರಣಗಳು ಸುಟ್ಟು ಹೋಗಿದ್ದು ಸ್ಥಳಕ್ಕೆ ಶಾಸಕ ಡಾ| ಭರತ್‌ ಶೆಟ್ಟಿ ವೈ, ಮೇಯರ್‌ ಜಯಾನಂದ ಅಂಚನ್‌, ಸ್ಥಳೀಯ ಮನಪಾ ಸದಸ್ಯ ವರುಣ್‌ ಚೌಟ, ಉಮೇಶ್‌ ದೇವಾಡಿಗ ಇಡ್ಯಾ, ಉಪತಹಶೀಲ್ದಾರ್‌ ನವೀನ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -
spot_img

Latest News

error: Content is protected !!