- Advertisement -
- Advertisement -
ಉಪ್ಪಿನಂಗಡಿ: ಮನೆಯಲ್ಲಿ ಯಾರು ಇಲ್ಲ ಎಂದು ಖಾತ್ರಿಪಡಿಸಿಕೊಂಡು ನುಗ್ಗಿದ ಕಳ್ಳರು, ಮನೆಯಲ್ಲಿದ್ದ ಐದು ಪವನ್ ಚಿನ್ನ ಹಾಗೂ ಹಣವನ್ನು ಕಳವುಗೈದು ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಮುರಿಯಾಳ ಎಂಬಲ್ಲಿ ನಡೆದಿದೆ.
ಈ ಬಗ್ಗೆ ಮನೆ ಮಾಲಕಿ ಶಾಹಿದಾ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಮನೆ ಮಾಲಕಿ ಶಾಹಿದಾ ಕಳೆದ ನಾಲ್ಕು ದಿನಗಳ ಹಿಂದೆ ತಮ್ಮ ತವರು ಮನೆಗೆ ಹೋಗಿದ್ದು, ಹಿಂದೆ ಬಂದು ನೋಡುವಾಗ ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಪುತ್ತೂರು ಡಿವೈಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -