Tuesday, May 21, 2024
Homeಕರಾವಳಿಬೆಳ್ತಂಗಡಿಯ ಕಕ್ಕಿಂಜೆಯಲ್ಲಿ ಹಿಂಬಾಗಿಲು ಮುರಿದು ಮನೆಗೆ ನುಗ್ಗಿದ ಕಳ್ಳರು : ಚಿನ್ನಾಭರಣ ಹಾಗೂ ನಗದು ಕಳ್ಳತನ

ಬೆಳ್ತಂಗಡಿಯ ಕಕ್ಕಿಂಜೆಯಲ್ಲಿ ಹಿಂಬಾಗಿಲು ಮುರಿದು ಮನೆಗೆ ನುಗ್ಗಿದ ಕಳ್ಳರು : ಚಿನ್ನಾಭರಣ ಹಾಗೂ ನಗದು ಕಳ್ಳತನ

spot_img
- Advertisement -
- Advertisement -

ಬೆಳ್ತಂಗಡಿ: ಮನೆಯ ಹಿಂಬಾಗಿಲು ಮುರಿದು ಒಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದ ಕತ್ತರಿಗುಡ್ಡೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದ ಕತ್ತರಿಗುಡ್ಡೆ ನಿವಾಸಿ ಇಕ್ಬಾಲ್ ಎಂಬವರಿಗೆ ಸೇರಿದ ಮನೆಯಲ್ಲಿ ತಂಗಿ ಝರಿನಾ ಮತ್ತು ಇಬ್ಬರು ಮಕ್ಕಳು ಮಾತ್ರ ವಾಸವಾಗಿದ್ದಾರೆ. ಗಂಡ ಇಸ್ಮಾಯಿಲ್ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಝರಿನಾ ಮತ್ತು ಮಕ್ಕಳು ಮೂರು ದಿನದ ಹಿಂದೆ ತವರು ಮನೆ ಬದ್ಯಾರಿಗೆ ಹೋಗಿದ್ದರು. ಇದನ್ನು ಅರಿತ ಕಳ್ಳರು ಭಾನುವಾರ ರಾತ್ರಿ ಹಿಂಬಾಗಿಲು ಮುರಿದು ಒಳನುಗ್ಗಿದಾರೆ. ಬಳಿಕ ಕಪಾಟು ಒಡೆದು ಎರಡು ಪವನ್ ಚಿನ್ನ ಮತ್ತು ಸುಮಾರು 16,000 ಹಣ ಕಳ್ಳತನ ಮಾಡಿದ್ದಾರೆ.

ಮನೆಯಲ್ಲಿದ್ದ ಬಟ್ಟೆ ಹಾಗೂ ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಕ್ಬಾಲ್ ಮನೆಗೆ ಬಂದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಮನೆಗೆ ಬಂದು ಪರಿಶೀಲನೆ ನಡೆಸಿದ್ದು ಕೃತ್ಯವನ್ನು ಸ್ಥಳೀಯರು ಮಾಡಿರುವ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಧರ್ಮಸ್ಥಳ ಠಾಣೆಯ ಪಿಎಸ್ಐ ಕೃಷ್ಣಕಾಂತ್ ಪಾಟೀಲ್ ಮತ್ತು ತಂಡ ತನಿಖೆ ನಡೆಸುತ್ತಿದೆ.

- Advertisement -
spot_img

Latest News

error: Content is protected !!