Friday, June 27, 2025
Homeಕರಾವಳಿಮಂಗಳೂರುವಿಟ್ಲ: ಮನೆಯೊಂದಕ್ಕೆ ನುಗ್ಗಿ ಕಳ್ಳರು ಚಿನ್ನಾಭರಣ ದೋಚಿ ಪರಾರಿ

ವಿಟ್ಲ: ಮನೆಯೊಂದಕ್ಕೆ ನುಗ್ಗಿ ಕಳ್ಳರು ಚಿನ್ನಾಭರಣ ದೋಚಿ ಪರಾರಿ

spot_img
- Advertisement -
- Advertisement -

ವಿಟ್ಲ: ಮನೆಯೊಂದಕ್ಕೆ ನುಗ್ಗಿ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಜೂ.19ರ ತಡರಾತ್ರಿ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ.

ವಿಟ್ಲದ ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್‌ರವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.

ರಜತ್ ಭಟ್ ರವರು ಹೆಂಡತಿ ಮತ್ತು 2 ಮಕ್ಕಳೊಂದಿಗೆ ವಾಸವಾಗಿದ್ದರು.ಜೂ.19ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!