- Advertisement -
![]()
- Advertisement -
ಹುಬ್ಬಳ್ಳಿ: ನಿನ್ನೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 100ಕ್ಕೂ ಹೆಚ್ಚು ಜನರನ್ನ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಗ್ಗೆ 10.30ಕ್ಕೆ ಪೊಲೀಸರು ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಪರಾರಿಯಾಗಿರುವ ಮತ್ತಷ್ಟು ಆರೋಪಿಗಳಿಗಾಗಿ 2 ಪೊಲೀಸ್ ತಂಡಗಳಿಂದ ಶೋಧಕಾರ್ಯ ನಡೆಯುತ್ತಿದೆ.
ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸ್ ಇಲಾಖೆ ಪ್ರಕರಣವನ್ನ ಎಡಿಜಿಪಿ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ತನಿಖೆ ನಡೆಯುಸುತ್ತಿದೆ. ನಿನ್ನೆ ರಾತ್ರಿಯೇ ಹಳೇ ಹುಬ್ಬಳ್ಳಿ ಠಾಣೆಗೆ ಭೇಟಿ ನೀಡಿ ಎಡಿಜಿಪಿ ಕಮಿಷನರ್ ಲಾಬೂರಾನ್ ರಿಂದ ಮಾಹಿತಿ ಪಡೆದಿದ್ದಾರೆ.
- Advertisement -


