Monday, June 30, 2025
Homeಕರಾವಳಿಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂದ ಜನ ಸಾಗರ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂದ ಜನ ಸಾಗರ

spot_img
- Advertisement -
- Advertisement -

ಸುಬ್ರಹ್ಮಣ್ಯ: ಕಡಬ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಜನ ಜಂಗುಳಿ ಏರ್ಪಟ್ಟಿತ್ತು. ಷಷ್ಠಿ, ಆಶ್ಲೇಷ ನಕ್ಷತ್ರ ಮತ್ತು ದೇವರು ಒಳಾಂಗಣ ಪ್ರವೇಶಿಸುವ ದಿನವಾದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದರು.

ವಾರಾಂತ್ಯದ ಕಾರಣ ಶನಿವಾರ ರಾತ್ರಿಯೇ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಹೀಗಾಗಿ ದೇವಸ್ಥಾನದ ವಸತಿಗೃಹಗಳು ಹಾಗೂ ಖಾಸಗಿ ವಸತಿಗೃಹಗಳು ಭರ್ತಿಯಾಗಿದ್ದವು.

ಹೀಗಾಗಿ ಇಂದು ದೇವಸ್ಥಾನಕ್ಕೆ ಆಗಮಿಸಿದವರಿಗೆ ದೇವಸ್ಥಾನದ ಭೋಜನ ಶಾಲೆಯ ಮೇಲಿನ ಮಹಡಿ ಮತ್ತು ಆದಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಇದಲ್ಲದೇ ಇಂದು ಭಕ್ತರ ಸಂಖ್ಯೆ ಹೆಚ್ಚಾಗಿದ್ದ ಕಾರಣ ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೂಡಾ ಅನ್ನ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು

- Advertisement -
spot_img

Latest News

error: Content is protected !!