- Advertisement -
- Advertisement -
ಬೆಳ್ತಂಗಡಿ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರೇ ತಮ್ಮ ವಾಹನದಲ್ಲಿ ಕರೆದುಕೊಂಡು ಹೋದ ಘಟನೆ ನಡೆದಿದೆ.
ಬೆಳ್ತಂಗಡಿಯ ಗುರುವಾಯನಕೆರೆಯ ಮುಸ್ಲಿಂ ಮಹಿಳೆಯೊಬ್ಬರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ಮಂಗಳೂರಿನ ಎ ಜೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅರ್ಕುಲ ಎಂಬಲ್ಲಿ ವಾಹನ ಕೆಟ್ಟುಹೋಗಿದೆ. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಮಂಗಳೂರಿನ ಪೋಲಿಸರು ಸ್ವತಃ ಅವರ ಪೋಲಿಸ್ ವಾಹನದಲ್ಲಿ ಎಜೆ ಆಸ್ಪತ್ರೆಗೆಗೆ ಕರೆದುಕೊಂಡು ಹೋಗುವ ಮೂಲಕ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ.
ಇದೀಗ ಪೊಲೀಸರ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
- Advertisement -