- Advertisement -
![]()
- Advertisement -
ಕಾರ್ಕಳ: ಪತ್ನಿಗೆ ಕತ್ತಿಯಿಂದ ಹಲ್ಲೆ ನಡೆಸಿ ಪತಿ ಆತ್ಮಹ*ತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ವ್ಯಕ್ತಿಯೊಬ್ಬರು ತನ್ನ ಪತ್ನಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಚಿಕ್ಕಲ್ಬೆಟ್ಟು ನಡಿಮತ್ತಾವು ಎಂಬಲ್ಲಿ ನಡೆದಿದೆ.ಗೋಪಾಲಕೃಷ್ಣ (60) ಪತ್ನಿ ಸುರೇಖಾ(44) ಗೆ ಕತ್ತಿಯಿಂದ ಹಲ್ಲೆ ನಡೆಸಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.
ದಿನಾಂಕ 15/07/2025 ರಂದು ಮಧ್ಯಾಹ್ನ 2:15 ಗಂಟೆಗೆ ಸುರೇಖಾ ಅವರಿಗೆ ಗೋಪಾಲಕೃಷ್ಣ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ಸುರೇಖಾ ಮೈಯಿಂದ ರಕ್ತ ಬರುವುದನ್ನು ನೋಡಿ ಹೆದರಿ ಮಧ್ಯಾಹ್ನ 14:20 ಗಂಟೆಯಿಂದ 14:40 ಗಂಟೆಯ ವೇಳೆಗೆ ತನ್ನ ಮನೆಯ ತೋಟದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -


